ಖಾಸಗಿ ಬಸ್- ಕಾರು ಡಿಕ್ಕಿ: ಓರ್ವ ಸಾವು

Kranti Deepa

ಶಿವಮೊಗ್ಗ, ಜೂ.04 : ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿ, ಬಸ್‌ನಲ್ಲಿದ್ದ ಎಂಟು ಮಂದಿಗೆ ಗಾಯವಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ಗುರುವಾರ ಬೆಳಗಿನ ಜಾವ ೫ ಗಂಟೆಗೆ ನಡೆದಿದೆ.

ವಿವೇಕ್ ಟ್ರಾವೆಲ್ಸ್ ಬಸ್ ಎಲ್‌ಎಲ್‌ಆರ್ ರಸ್ತೆಯಲ್ಲಿ ಬರುತ್ತಿರುವಾಗ ಸವಾರ್ ಲೈನ್ ರಸ್ತೆಯಿಂದ ಕಾರೊಂದು ಏಕಾಏಕಿ ನುಗ್ಗಿದೆ. ಈ ವೇಳೆ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಪ್ರದೀಪ್ ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಡಿಕ್ಕಿ ಹೊಡೆದ ಬಸ್ ರಸ್ತೆ ಪಕ್ಕದ ಫುಟ್‌ಪಾತ್ ಮೇಲೇರಿ ಅಂಗಡಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಸ್‌ನಲ್ಲಿದ್ದ ಎಂಟು ಮಂದಿಗೆ ಗಾಯಗಳಾಗಿವೆ. ತಕ್ಷಣ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪಶ್ಚಿಮ ಸಂಚಾರಿ ಪೊಲೀಸರು ಭೇಟಿ ನೀಡಿ ಬಸ್‌ನ್ನು ತೆರವುಗೊಳಿಸಿದರು.

Share This Article
";