ಕರ್ತವ್ಯ ನಿರತ ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ

Kranti Deepa

ಶಿವಮೊಗ್ಗ ಮೇ, 27 :  ಇಲ್ಲಿನ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ೮ನೇ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಣ್ಣ ಗುಡಾದಾರ್, 26  ವರ್ಷ ಅವರು ಮಂಗಳವಾರದಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದು, ಕಳೆದ 7 ವರ್ಷಗಳಿಂದ ಶಿವಮೊಗ್ಗದ ಕೆಎಸ್‌ಆರ್‌ಪಿ ೮ನೇ ಪಡೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೇ 26 ರಂದು ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದಾಗ ತಕ್ಷಣ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ಈರಣ್ಣ ಅವರಿಗೆ ಕೇವಲ 18 ದಿನಗಳ ಹಿಂದೆಯಷ್ಟೇ ವಿವಾಹವಾಗಿತ್ತು ಎನ್ನಲಾಗಿದ್ದು, ಮೃತರು ಪತ್ನಿ, ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಸಂತಾಪ:
ಯುವ ಪೊಲೀಸ್ ಸಿಬ್ಬಂದಿಯ ಅಕಾಲಿಕ ನಿಧನಕ್ಕೆ ಕೆಎಸ್‌ಆರ್‌ಪಿ 8 ನೇ ಪಡೆಯ ಕಮಾಂಡೆಂಟ್ ಆದ ಎಸ್. ಯುವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ  ಸಿಗಲಿ ಎಂದು ಕಮಾಂಡೆಂಟ್ ಕೋರಿದ್ದಾರೆ.

Share This Article
";