ಮಹಿಷಿ ಉತ್ತರಾದಿ ಮಠದಲ್ಲಿ ಒಂದು ಕೋಟಿ ರೂ. ಮೌಲ್ಯದ ಆಭರಣ ಕಳ್ಳತನ

Kranti Deepa

ತೀರ್ಥಹಳ್ಳಿ , ಜೂನ್.18 :  ತಾಲ್ಲೂಕಿನ ಮಹಿಷಿ ಗ್ರಾಮದಲ್ಲಿರುವ ಅತ್ಯಂತ ಪುರಾತನ ಉತ್ತರಾದಿ ಮಠದಲ್ಲಿ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಚಿನ್ನದ ವಸ್ತುಗಳು ಕಣ್ಮರೆಯಾಗಿದೆ ಎಂದು ಸ್ಥಳೀಯವಾಗಿ ವರದಿಯಾಗಿದೆ.

ಜೂನ್ 17 ರ ಬುಧವಾರದಂದು ಈ ಪ್ರಕರಣ ಬೆಳಕಿಗೆ ಬಂದಿದೆ. ಮಠದ ಗರ್ಭಗುಡಿಯಲ್ಲಿದ್ದ 750 ಗ್ರಾಂ ತೂಕದ ಚಿನ್ನದ ವಸ್ತುಗಳು ಸೇರಿದಂತೆ ಪಂಚಲೋಹದ ಪೂಜಾ ಪರಿಕರಗಳು ನಿಗೂಢವಾಗಿ ಕಳುವಾಗಿವೆ.

ಕಳೆದ ಮೂರು ದಿನಗಳಿಂದ ಮಠದಲ್ಲಿ ಗುರುವಂದನೆ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮದ ನಿಮಿತ್ತ ಬುಧವಾರ ಮಧ್ಯಾಹ್ನದ ವೇಳೆ ಮಠದಲ್ಲಿ ಪೂಜಾ ವಿಧಿವಿಧಾನಗಳು ನಡೆಯುತ್ತಿರುವಾಗಲೇ ಚಿನ್ನದ ವಸ್ತುಗಳು ಕಳ್ತನವಾಗಿರುವುದು ಗೊತ್ತಾಗಿದೆ. ಕಳುವಾದ ವಸ್ತುಗಳ ಪೈಕಿ ದೇವರ ಪೂಜೆಗೆ ಬಳಸಲಾಗಿದ್ದ ಚಿನ್ನದ ದೀಪಾರತಿಗಳು, ಚಿನ್ನದ ದೀಪಗಳು ಹಾಗೂ ಪಂಚಲೋಹದಿಂದ ಮಾಡಲ್ಪಟ್ಟ ಸುಮಾರು 15 ಕ್ಕೂ ಹೆಚ್ಚು ವಸ್ತುಗಳು ಇದ್ದವು ಎನ್ನಲಾಗಿದೆ.

ಘಟನಾ ಸಮಯದಲ್ಲಿ ಮಠದ ಆವರಣದಲ್ಲಿ ಕೇವಲ ಮಠಕ್ಕೆ ಸಂಬಂಧಿಸಿದವರು ಮಾತ್ರ ಇದ್ದರು ಎಂದು ಹೇಳಲಾಗುತ್ತಿದೆ.ಘಟನೆ ಬಗ್ಗೆ ವಿಷಯ ತಿಳಿದು ಸ್ತಳಕ್ಕೆ ಮಾಳೂರು ಪೊಲೀಸ್‌ರು ತೆರಳಿ ಪರಿಶೀಲನೆ ನಡೆಸಿದ್ದಾರರ. ಈ ಬಗ್ಗೆ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮಾಹಿತಿ ಕೊಡಲಾಗಿದೆ.

Share This Article
";