ಶಿವಮೊಗ್ಗ,ಜೂ.19 : ಉದ್ಘಾಟನೆಯಾದ ಒಂದು ತಿಂಗಳ ಒಳಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಕಂಡಿದೆ. ಶಿವಮೊಗ್ಗದಿಂದ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಚಿಕ್ಕಕೊಡ್ಲಿ ಗ್ರಾಮದಿಂದ ಭದ್ರಾ ನದಿಗೆ ನಿರ್ಮಿಸಿರುವ ಸೇತುವೆಗೆ ಸಂಪರ್ಕ ಕಲ್ಪಿಸಿರುವ ರಸ್ತೆಯಲ್ಲಿ ಸುಮಾರು 10 ಅಡಿಗೂ ಅಕ ಉದ್ದವಾದ ಬಿರುಕು ಕಾಣಿಸಿಕೊಂಡಿದೆ.
ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಸಂಪರ್ಕ ಕಲ್ಪಿಸುವ 103 ಕಿಲೋ ಮೀಟರ್ ದೂರದ ರಸ್ತೆಯನ್ನು 527 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿತ್ತು. ಇಷ್ಟು ಬೇಗ ರಸ್ತೆ ಬಿರುಕು ಬಿಟ್ಟಿರುವುದರಿಂದ ರಸ್ತೆ ಪಕ್ಕದ ಜಮೀನಿನವರಿಗೆ ಆತಂಕವನ್ನುಂಟು ಮಾಡಿದೆ.
ಹೊಳೆಹೊನ್ನೂರು ಬೈಪಾಸ್ ರಸ್ತೆ ಬಿರುಕು ಬಿಟ್ಟಿರುವುದರಿಂದಾಗಿ ರಸ್ತೆಯ ಕಾಮಗಾರಿ ನಡೆಸಿದ ಗುತ್ತಿಗೆದಾರನ ಮೇಲೆ ಸಂಸದ ಬಿ.ವೈ. ರಾಘವೇಂದ್ರ ಗರಂ ಆಗಿದ್ದಾರೆ. ಗುತ್ತಿಗೆದಾರನ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಬಿರುಕು ಬಿಟ್ಟಿರುವುದನ್ನು ತಕ್ಷಣ ಸರಿಪಡಿಸಬೇಕು. ಅಕಾರಿಗಳು ಹಾಗೂ ಗುತ್ತಿಗೆದಾರನ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.