ಮಂಗಳವಾರಗಳಂದು ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ವೀಕ್ಷಣೆಗೆ ಆಹ್ವಾನ

Kranti Deepa

ಶಿವಮೊಗ್ಗ, ಸೆ.  29:  ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:30.09.2025 ಹಾಗೂ 07.10.2025ರ ಮಂಗಳವಾರವೂ ಸಹ ತೆರೆದಿರುತ್ತದೆ.

ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article
";