ಶಿವಮೊಗ್ಗ, ಮೇ ,16 : ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಸಕಲ ಸಿದ್ಧತೆಗಳು ಪೂರ್ಣ ಗೊಂಡಿದ್ದು ಮುಖ್ಯಮಂತ್ರಿಗಳು ಬರುವುದು ನಿಶ್ಚಿತ ವಾಗಿದೆ ಎಂದು ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು. ಸರ್ಕಾರಿ ನೌಕರ ಭವನದಲ್ಲಿ ಇಂದು ಕ್ರೀಡಾಕೂಟದ ಟ್ರೋಫಿ ಹಾಗೂ ಟ್ರ್ಯಾಕ್ಸೂಟ್ಗಳನ್ನ ಬಿಡು ಗಡೆ ಗೊಳಿಸಿ ಮಾತನಾಡಿದ ಅವರು, ಭಾಗವಹಿಸುವಂತಹ ಎಲ್ಲಾ 15,000 ನೌಕರ ಕ್ರೀಡಾಪಟುಗಳಿಗೆ ಟ್ರ್ಯಾಕ್ ಸೂಟ್ ವಿತರಿಸಲಾಗುವುದು ನೋಂ ದಣಿ ಸಂದರ್ಭದಲ್ಲಿಯೇ ಇದನ್ನು ಆಟಗಾರರಿಗೆ ನೀಡಲಾಗುವುದು. ಸ್ಪರ್ಧೆಯಲ್ಲಿ ಗೆದ್ದಂತಹ ಎಲ್ಲಾ ವಿಜೇತರಿಗೆ ಪ್ರಥಮ ದ್ವಿತೀಯ ತೃತೀಯ ಬಹುಮಾನವಾಗಿ ಆಕ ರ್ಷಕ ಟ್ರೋಫಿಯನ್ನು ಕೊಡಲಾ ಗುತ್ತಿದೆ.
ಇದೇ ಪ್ರಥಮ ಬಾರಿಗೆ ಅತ್ಯಂತ ಆಕರ್ಷಕವಾದ ಟ್ರೋಫಿ ಯನ್ನ ಸಂಘ ನೀಡಲು ಉದ್ದೇಶಿಸಿದೆ ಎಂದ ಅವರು ಗೆದ್ದಂತಹ ಸ್ಪರ್ಧಾಳು ಗಳಿಗೆ ಸಫಾರಿ ಕಂಪನಿಯ ಟ್ರಾಲಿ ಬ್ಯಾಗನ್ನು ಕೂಡ ನೀಡಲಾಗುತ್ತಿದೆ ಎಂದು ಹೇಳಿದರು. ಮುಖ್ಯಮಂತ್ರಿಗಳು ಮೇ.18 ರ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ನಗರಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ ಪ್ರವಾಸಿ ಮಂದಿರದಲ್ಲಿ ಸ್ವಲ್ಪ ವಿಶ್ರಾಂತಿ ಪಡೆದು ನಾಲ್ಕು ಗಂಟೆಗೆ ಸಮಾರಂಭಕ್ಕೆ ಆಗಮಿಸಲಿದ್ದು , ಸಮಯ ಕ್ಕೆ ಸರಿ ಯಾಗಿ ಕಾರ್ಯಕ್ರಮ ಆರಂಭ ವಾಗ ಲಿದೆ ಉಪಮುಖ್ಯಮಂತ್ರಿಗಳು ಕೂಡ ರಸ್ತೆ ಮಾರ್ಗವಾಗಿ ಕಾರ್ಯಕ್ರಮ ವನ್ನು ಸೇರಲಿದ್ದಾರೆ ಅದೇ ರೀತಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿವಿಧ ಜನ ಪ್ರತಿನಿಧಿಗಳು ಈ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಮೇ 19 ರಂದು ಸಂಜೆ 6.30 ಕ್ಕೆ ನೆಹರು ಕ್ರೀಡಾಂಗಣದಲ್ಲಿ ಜನಪದ ದಿಬ್ಬಣ ಕಾರ್ಯಕ್ರಮ ನಡೆಯಲಿದ್ದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿವಿಯ ಜಗದೀಶ್ ಹಾಗೂ ಶಿವಮೊಗ್ಗ ಕೇಂದ್ರ ವಲಯ ಸಂಪರ್ಕ ಮತ್ತು ಕಟ್ಟಡದ ಮುಖ್ಯ ಇಂಜಿನಿಯರ್ ಬಿ.ವಿ. ಜಗದೀಶ್ ಇವರುಗಳು ಕಾರ್ಯ ಕ್ರಮದಲ್ಲಿ ಉಪಸ್ಥಿತರಿ ರುತ್ತಾರೆ ಮುಖ್ಯ ಅತಿಥಿಗಳಾಗಿ ಸಿದ್ದಲಿಂಗ ರೆಡ್ಡಿ ಶಾಹಿ ಎಕ್ಸ್ಪೋರ್ಟ್ನ ವ್ಯವಸ್ಥಾಪಕ ಲಕ್ಷ್ಮಣ್ ಸೂಡ ಆಯುಕ್ತ ವಿಶ್ವನಾಥ್ ಉಪಸ್ಥಿತರಿ ರುತ್ತಾರೆ ಎಂದರು ಮೇ 20 ರಂದು ಕುವೆಂಪು ರಂಗ ಮಂದಿರದಲ್ಲಿ ನಡೆಯುವ ಸಮಾ ರೋಪ ಸಮಾರಂಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹಾಗೂ ಮಾಜಿ ಶಾಸಕ ರಾದ ಆರ್ ಮಂಜುನಾಥ್ ನೆರವೇರಿಸಲಿದ್ದಾರೆ.
ಇವರೊಂದಿಗೆ ಬಿಸಿಬಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಕೆ ಮರಿಯಪ್ಪ ಕಾಂಗ್ರೆಸ್ ಮುಖಂಡ ಎಂ ಶ್ರೀಕಾಂತ್ ಸೇರಿದಂತೆ ಅನೇಕ ಮುಖಂಡರು ಸಮಾರಂಭದಲ್ಲಿ ಇರುತ್ತಾರೆ ಎಂದರು. ಕ್ರೀಡಾಕೂಟದಲ್ಲಿ ಭಾಗವಹಿ ಸುವಂತಹ ಎಲ್ಲಾ ನೌಕರ ಬಂಧು ಗಳಿಗೆ ಊಟ ವಸತಿ ವ್ಯವಸ್ಥೆಯನ್ನು ಅತ್ಯಂತ ಅಚ್ಚುಕಟ್ಟಾಗಿ ಮಾಡಲಾಗಿದೆ. ಎಲ್ಲರಿಗೂ ಕೂಡ ಅವರ ವಾಟ್ಸಪ್ ಗಳಿಗೆ ಕ್ಯೂಆರ್ ಕೋಡ್ನ್ನು ಹಾಕಲಾ ಗುತ್ತಿದೆ ಅದರಲ್ಲಿ ಎಲ್ಲ ಸಮಗ್ರ ಮಾಹಿತಿ ದೊರೆಲಿದೆ ಯಾರಿಗೂ ಕೂಡ ಗೊಂದಲ ಆಗದಂತೆ ಮತ್ತು ಎಲ್ಲಿ ಯೂ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು. ಕ್ರೀಡಾಪಟುಗಳು ಓಡಾಡಲು ಅನುಕೂಲವಾಗುವಂತೆ ೪೦ ಬಸ್ಗಳ ವ್ಯವಸ್ಥೆಯನ್ನು ಮಾಡಲಾಗಿದ್ದು ಅವರು ಉಳಿದುಕೊಳ್ಳುವ ಸ್ಥಳದಿಂದ ಊಟಕ್ಕೆ ಮತ್ತು ಕ್ರೀಡಾಗಳು ನಡೆ ಯುವ ಸ್ಥಳಕ್ಕೆ ಇವರುಗಳನ್ನ ಬಸ್ನಲಿ ಕಳಿಸಿಕೊಡಲಾಗುತ್ತದೆ ಎಂ ದರು. ಈ ಸಂದರ್ಭದಲ್ಲಿ ನೌಕರ ಸಂಘದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ ಕಾರ್ಯದರ್ಶಿ ಪಾಪಣ್ಣ ,ಉಪಾಧ್ಯಕ್ಷ ರವಿ, ಸಿದ್ಬಸಪ್ಪ, ದಿನೇಶ್ ರಂಗನಾಥ್ , ವಾರ್ತಾಧಿಕಾರಿ ಮಾರುತಿ ಇತರರು ಉಪಸ್ಥಿತರಿದ್ದರು